
ಮಾನ್ಯರೆ, ಇಂದು ದಿನಾಂಕ 26/11/2025 ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಮತ್ತು ರಕ್ಷಣಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಾಯಿತು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಕೀರ್ತನಾ IAS. ಸಹಾಯಕ ಕಾರ್ಮಿಕ ಆಯುಕ್ತರಾದ ಶ್ರೀ ಸುಭಾಷ್ ಎಂ ಆಲದಕಟ್ಟಿ, ಜಿಲ್ಲಾ ಆರೋಗ್ಯ ಅಧಿಕಾರಿಗಳಾದ ಡಾ।। ಅಶ್ವಥ್ ಬಾಬು, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳಾದ ಶ್ರೀ ಮಂಜುನಾಥ್, ಕಾರ್ಮಿಕ ನಿರೀಕ್ಷಕರು ಶ್ರೀ H.K ಪ್ರಭಾಕರ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಮತ್ತು ಎಲ್ಲಾ ತಾಲ್ಲೂಕು ಶಿಶು ಅಭಿವೃದ್ಧಿ ಅಧಿಕಾರಿಗಳು, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ಶ್ರೀಮತಿ ಜಯಶೀಲ ಸದಸ್ಯ ಶ್ರೀ ಅಪ್ಪು, ವಿಕಸನ ಸಂಸ್ಥೆಯ ಅಧ್ಯಕ್ಷರಾದ ವರ್ಗೀಸ್ ಕ್ಲೀಟಸ್ ಸರ್ವೋದಯ ಸಮಾಜ ಸೇವಾ ಸಂಸ್ಥೆಯ ಶ್ರೀ ಸಿದ್ಧರಾಮು ಮತ್ತು ಇತರೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು. ಈ ಸಂದರ್ಭದಲ್ಲಿ ಅಂತರ್ರಾಷ್ಟ್ರೀಯ ದತ್ತು ಸ್ವೀಕಾರ ಮಾಸಾಚರಣೆ ಅಂಗವಾಗಿ ಸರ್ವರಿಗೂ ಮಾನ್ಯ ಜಿಲ್ಲಾಧಿಕಾರಿಗಳು ಪ್ರತಿಜ್ಞೆ ಬೋಧಿಸಿದರು. ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಅಂತರ್ರಾಷ್ಟ್ರೀಯ ದತ್ತು ಸ್ವೀಕಾರ ಕುರಿತಂತೆ ಪೋಸ್ಟರ್ ಬಿಡುಗಡೆ ಮಾಡಿದರು.







