
ಹಾಸನ ಜಿಲ್ಲೆಯಲ್ಲಿ ಮಾಧ್ಯಮಗಳಲ್ಲಿ ಹೃದಯಘಾತ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ವಾಹನ ಚಾಲಕರುಗಳಿಗೆ ಉಚಿತ ಆರೋಗ್ಯ ತಪಾಸಣೆ ಏರ್ಪಡಿಸುವಂತೆ ಮೌಖಿಕ ಸಂದೇಶವನ್ನು ನೀಡಿದ್ದು ಇದರ ಸಲುವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ದಿನಾಂಕ 1.8.2025 ರಂದು ಹಾಸನ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದ್ದು ಜಿಲ್ಲೆಯ ಎಲ್ಲಾ ಬಗೆಯ ಚಾಲಕರುಗಳು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಅರಸೀಕೆರೆ ತಾಲೂಕು ಸರ್ಕಾರಿ ನೌಕರ ಸಂಘದ ಮಾಜಿ ಅಧ್ಯಕ್ಷರಾದ ಎಂ ಆರ್ ಕೃಷ್ಣಮೂರ್ತಿ ಮನವಿ ಮಾಡಿದ್ದಾರೆ