
ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ತಾಲೂಕು ಮಾದಿಗೊಂಡನಹಳ್ಳಿ ಸಮೀಪವಿರುವ ಶ್ರೀ ಕ್ಷೇತ್ರ ಭಕ್ತ ಮುನೇಶ್ವರ ಶ್ರೀ ಕ್ಷೇತ್ರದಲ್ಲಿ 20ನೇ ವರ್ಷದ ಅದ್ದೂರಿ ಕಾರ್ತಿಕ ಲಕ್ಷ ದೀಪೋತ್ಸವ ಕಾರ್ಯಕ್ರಮ ನಡೆಯಿತು ಈ ಕಾರ್ಯಕ್ರಮದಲ್ಲಿ ನಾಡಿನ ಖ್ಯಾತ ಹರ ಗುರು ಚರಮೂರ್ತಿಗಳು ಕಾಡುಸಿದ್ದೇಶ್ವರ ಮಠದ ಶ್ರೀ ಶ್ರೀ ಡಾ. ಕರಿ ಋಷಭ ದೇಶಿ ಕೇಂದ್ರ ಶಿವ ಯೋಗೇಶ್ವರ ಸ್ವಾಮಿಜಿ. ಹಾಗೂ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠ ಕೆಂಗೇರಿ ಬೆಂಗಳೂರಿನ ನಿಶ್ಚಲಾನಂದ ಮಹಾಸ್ವಾಮಿಜಿಯವರು ಹಾಗೂ ಸ್ಪಟಿಕಪುರಿ ಮಹಾಸಂಸ್ಥಾನದ ಪಟ್ಟನಾಯಕನಹಳ್ಳಿಯ ಶ್ರೀ ಶ್ರೀ ನಂಜಾವಧೂತ ಮಹಾ ಸ್ವಾಮೀಜಿಯವರು ಈ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ್ದರು
ಇದಲ್ಲದೆ ಹಲವಾರು ಶಾಸಕರು ಮಾಜಿ ಶಾಸಕರು ಹಾಗೂ ಸಚಿವರುಗಳು ಅದ್ದೂರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು







