ಉಮೇಶ್ ಬಾಣಾವರ

ಉಮೇಶ್ ಬಾಣಾವರ

324 Articles

ಅರಸೀಕೆರೆ ಇನ್ನರ್ ವೀಲ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ.

ಅರಸೀಕೆರೆ: ಇಲ್ಲಿನ ಇನ್ನರ್ ವಿಲ್ ಕ್ಲಬ್ ಅಧ್ಯಕ್ಷರು ಪದಾಧಿಕಾರಿಗಳು ಸದಸ್ಯರುಗಳು ಬಹಳ ಕ್ರಿಯಾಶೀಲರಾಗಿ ಒಳ್ಳೆಯ ಕಾರ್ಯಕ್ರಮಗಳನ್ನು ಮಾಡುತ್ತಿದ್ದೀರಿ ಎಂದು ಶಿವಮೊಗ್ಗ ದಕ್ಷಿಣ ಇನ್ನರ್ ವೀಲ್ ಕ್ಲಬ್ ಪಿ…

ಸಂಗೊಳ್ಳಿ ರಾಯಣ್ಣ ಪತ್ತಿನ ಸಹಕಾರ ಸಂಘದ ಪ್ರಥಮ ಮಹಿಳಾ ಅಧ್ಯಕ್ಷರಾಗಿ ಶ್ರೀ ಮತಿ. ಶೃತಿ ಮೋಹನ್ ಕುಮಾರ್ ಅವಿರೋಧ ಆಯ್ಕೆ.

ಸಹಕಾರ ಸಂಘದ ಅಧ್ಯಕ್ಷರಾಗಿದ್ದ ಗಂಡಸಿ ಜಗದೀಶ್ ಅವರ ನಿಧನದ ಬಳಿಕ ಸಂಘದ ಚಟುವಟಿಕೆಗಳನ್ನು ಮುಂದುವರಿಸುವ ನಿಟ್ಟಿನಲ್ಲಿ ಸರ್ವ ಸದಸ್ಯರ ಒಮ್ಮತದಿಂದ ಶ್ರೀ ಮತಿ. ಶೃತಿ ಮೋಹನ್ ಅವರು…

ನಗರಸಭೆ ವತಿಯಿಂದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಉಪ ಮುಖ್ಯಮಂತ್ರಿಗಳ ಸ್ವಾಗತಕ್ಕೆ ಅದ್ದೂರಿ ಸಿದ್ದತೆ.

ಅರಸೀಕೆರೆ ನಗರದ ನಾಗರಿಕರಿಗೆ ನಗರಸಭೆ ಆಗಿರುವ ಅಭಿವೃದ್ಧಿ ಕಾರ್ಯಕ್ರಮ ಗಳಾದ ಈಜುಕೊಳ ಐಡಿಎಸ್‌ಎಮ್‌ಟಿ ಯೋಜನೆಯೆಲ್ಲಿ ತರಕಾರಿ ಮಾರುಕಟ್ಟೆ ನಗರೋತ್ತಾನ ಯೋಜನೆ ಅಡಿಯಲ್ಲಿ ವಾಣಿಜ್ಯ ಸಂಕೀರ್ಣ ಮತ್ತು ನಗರದ…

ಸಕಲೇಶಪುರ : ‘ಮನೆ ಮನೆಗೆ ಪೊಲೀಸ್’ ಅಭಿಯಾನಕ್ಕೆ ಚಾಲನೆಕರ್ನಾಟಕ ಸರ್ಕಾರ ಉಪಕ್ರಮ ‘ಮನೆ ಮನೆಗೇ ಪೊಲೀಸ್’ ಎಂಬ ವಿನೂತನ ಕಾರ್ಯಕ್ರಮ ಅಂಗವಾಗಿ, ಸಕಲೇಶಪುರ ನಗರ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಯುತ ಮಹೇಶ್ ಅವರು ಚಾಲನೆ ನೀಡಿದರು.ಅಭಿಯಾನದ ಉದ್ದೇಶ ವ್ಯವಸ್ಥೆಯನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಸಮುದಾಯ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವುದು ಮತ್ತು ಅಸ್ತಿತ್ವದಲ್ಲಿರುವ ಪೊಲೀಸ್ ವ್ಯವಸ್ಥೆಯನ್ನು ಸಾರ್ವಜನಿಕ ಸ್ನೇಹಿ ಮತ್ತು ಕ್ರಿಯಾಶೀಲ ಪಡೆಯನ್ನಾಗಿ ಪರಿವರ್ತಿಸುವುದಾಗಿದೆ.’ಮನೆ ಮನೆಗೇ ಪೊಲೀಸ್’ ಪರಿಕಲ್ಪನೆ, ಪೊಲೀಸ್ ಸೇವೆ ಪ್ರತಿ ಮನೆಗೆ ತಲುಪಲಿ ಮತ್ತು ಪೊಲೀಸರ ಕಾರ್ಯಮನೆ ಮಂದಿಗೆ ಮನವರಿಕೆಯಾಗಲಿ ಎಂಬ ಉದ್ದೇಶದಿಂದ ಸರ್ಕಾರ ಹೊರಡಿಸಿರುವ 27 ಅಂಶಗಳ ಸುತ್ತೋಲೆಯನ್ನು ಮನವರಿಕೆ ಮಾಡಿಕೊಂಡು ಪ್ರತಿ ಮನೆಗಳಿಗೆ ಭೇಟಿ ನೀಡಿ ಕಾರ್ಯಕ್ರಮದ ಮೂಲ ಉದ್ದೇಶ.ಕಾರ್ಯಕ್ರಮದ ಅನುಷ್ಠಾನದಲ್ಲಿ ಸಾರ್ವಜನಿಕರ ಸಹಕಾರವನ್ನು ಕೋರಲಾಗಿದೆ. “ಸಾರ್ವಜನಿಕರು ತಮ್ಮ ಸಹಕಾರವನ್ನು ವಿಸ್ತರಿಸಲು ಪೊಲೀಸ್ ಇಲಾಖೆ ವಿನಂತಿಸುತ್ತದೆ” ಎಂದು ಸಾರ್ವಜನಿಕ ಜಾಗೃತಿಗಾಗಿ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳುವಾಗ ತಿಳಿಸಲಾಗಿದೆ, ಈ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ನಗರ ಪೋಲಿಸ್ ಸಿಬ್ಬಂದಿಗಳಾದ ಶ್ರೀಯುತ ಶ್ರೀಧರ್,ಶ್ರೀಯುತ ರೇವಣ್ಣ ಹಾಗೂ ಶ್ರೀಯುತ ಸುಜಾತ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.

ವರದಿ : ಭರತ್ ಮಲ್ನಾಡ್

ಕರ್ನಾಟಕ ಸ್ಟೇಟ್ ಟೈಲರ್ಸ ಅಸೋಸಿಯೇಷನ್ ರಿ ಕ್ಷೇತ್ರ ಸಮಿತಿ ಉಡುಪಿ ಇದರ ವತಿಯಿಂದ ಸಂಘಟನೆಯ ರಜತ ಸಂಭ್ರಮದ ಪ್ರಯುಕ್ತ ಸ್ನೇಹ ಸಮ್ಮಿಲನ – ಪ್ರತಿಭಾ ಪುರಸ್ಕಾರ ಹಾಗೂ ಮಹಾಸಭೆಯು ಇಂದು ತಾ-20/7/25ರಂದು ಬೆಳಿಗ್ಗೆ 10ಗಂಟೆಗೆ ಉಡುಪಿ ಜಗನ್ನಾಥ ಸಭಾ ಭವನದಲ್ಲಿ ಶ್ರೀ ಸುರೇಶ್ ಪಾಲನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಕ್ಷೇತ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ದಯಾನಂದ ಪ್ರಭು ಅತಿಥಿ ಅಭ್ಯಾಗತರನ್ನು ಸ್ವಾಗತಿಸಿದರು . ವರದಿ,ಲೆಕ್ಕ-ಪತ್ರ ಮಂಡಿಸಿ ಅನುಮೋದನೆ ಪಡೆಯಲಾಯಿತು . ನಂತರ ಜಿಲ್ಲಾ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಬಿ.ಕೆ.ಶ್ರೀನಿವಾಸ್ ನೂತನ ಸಮಿತಿಯನ್ನು ರಚಿಸಿದರು.ಅಧ್ಯಕ್ಷರಾಗಿ ಸುರೇಶ್ ಪಾಲನ್ ಪುನರಾಯ್ಕೆಯಾದರು. ಶ್ರೀ ಬಾಲಕೃಷ್ಣ ನಾಯ್ಕ್ ಪ್ರಧಾನ ಕಾರ್ಯದರ್ಶಿಯಾಗಿ ,ಶ್ರೀ ದಯಾನಂದ ಪ್ರಭು ಕೋಶಾಧಿಕಾರಿಗಳಾಗಿ ಆಯ್ಕೆಯಾಗಿದ್ದು, ಜೊತೆ ಕಾರ್ಯದರ್ಶಿಗಳಾಗಿ ಸಾವಿತ್ರಿ ಪಾಲ್ ಹಾಗೂ ಶ್ರೀಮತಿ ಬೇಬಿ , ಉಪಾಧ್ಯಕ್ಷರಾಗಿ ಶ್ರೀ ವಾಸು ಆಚಾರ್ಯ, ಶ್ರೀಮತಿ ಮೀನಾಕ್ಷಿ ಆಚಾರ್ಯ, ಶ್ರೀಮತಿ ಸುಲತ ಸೋನ್ಸ್,ಸಂಘಟನಾ ಕಾರ್ಯದರ್ಶಿಗಳಾಗಿ ಹರಿಶ್ಚಂದ್ರ ಆಚಾರ್ಯ , ಶೇಖರ್ ಬಂಢಾರಿ, ಸುಭಾಷ್ ಮಲ್ಪೆ, ಅಚ್ಚುತ ಆಚಾರ್ಯ, ಸುನೀತಾ ಜಯಕರ್, ಸತೀಶ್ ಸಂತೆಕಟ್ಟೆ, ಸುಜಾತಾ ಆಚಾರ್ಯ, ಉಡುಪಿ ಕ್ಷೇತ್ರ ಸಮಿತಿಯಿಂದ ಚುನಾಯಿತ ಪ್ರತಿನಿಧಿಗಳಾಗಿ ಶ್ರೀ ದಯಾನಂದ ಕೋಟ್ಯಾನ್, ಶ್ರೀ ಕೆ.ರಾಮಚಂದ್ರ, ಶ್ರೀ ಗುರು ರಾಜ್ M ಶೆಟ್ಟಿ, ಶ್ರೀಮತಿ ಉಷಾ ಸೇರಿಗಾರ್ ಮತ್ತು ಈಶ್ವರ ಸೇರಿಗಾರ್ ಆಯ್ಕೆಯಾಗಿರುತ್ತಾರೆ. 10ಹಾಗೂ12ನೇ ತರಗತಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುವ 16 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಸ್ನೇಹ ಸಮ್ಮಿಲನದ ಅಂಗವಾಗಿ 25 ವರ್ಷಗಳಿಂದ ಸಂಘಟನೆಯಲ್ಲಿ ಸೇವೆ ಸಲ್ಲಿಸಿದ ಹಿರಿಯರನ್ನು ಗೌರವದಿಂದ ಸನ್ಮಾನಿಸಲಾಯಿತು. ಉತ್ತಮ ಸಂಘಟಕರಾದ ರಾಜ್ಯ ಸಮಿತಿಯ ಮಾಜಿ ಕೋಶಾಧಿಕಾರಿ ಶ್ರೀ ಅಬ್ದುಲ್ ಖಾದರ್ ಮಾತನಾಡಿ ತಮ್ಮ ಅನುಭವಗಳನ್ನು ಹಂಚಿಕೊಂಡರು.ಉಡುಪಿ ಜಿಲ್ಲಾ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ಶ್ರೀ ವಿಠ್ಠಲ ಶೆಟ್ಟಿ ಯವರು ಮಾತನಾಡಿ 2000 ನೇ ಇಸವಿಯಲ್ಲಿ ಉಡುಪಿ ಕ್ಷೇತ್ರ ಸಮಿತಿಯು ರಚನೆಯಾಯಿತು.ಅಂದು ಉಡುಪಿಯ ಶ್ಯಾಂ ಕಾಂಪ್ಲೆಕ್ಸ್ ನಲ್ಲಿ ಅಂದಿನ ಪ್ರಸಿದ್ಧ ಟೈಲರ್ ಆಗಿದ್ದ ಶ್ರೀ ದಿ.ಶ್ಯಾಂ ಶೆಟ್ಟಿ ಯವರು ದೀಪ ಬೆಳಗಿಸಿ ಉದ್ಘಾಟಿಸಿದ್ದರು ಸ್ಥಾಪಕ ಅಧ್ಯಕ್ಷರಾಗಿ ಶ್ರೀ ರಾಮಕೃಷ್ಣ ನಾಯಕ್ (ಆರ್.ಕೆ. )ಯವರು ಆಯ್ಕೆಯಾದರು ಎನ್ನುತ್ತಾ ತಮ್ಮ ಹಿಂದಿನ ದಿನಗಳನ್ನು ನೆನಪಿಸಿಕೊಂಡರು.ಉಡುಪಿ ಕ್ಷೇತ್ರ ಸಮಿತಿಯ ಮಾಜಿ ಅಧ್ಯಕ್ಷರಾಗಿ , ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಶ್ರೀಮತಿ ಸಾವಿತ್ರಿ .ಟಿ. ಸಾಲ್ಯಾನ್ ರಾಜ್ಯ ಸಮಿತಿಯ ಕೋಶಾಧಿಕಾರಿ ಶ್ರೀ ಕೆ. ರಾಮಚಂದ್ರ, ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಶ್ರೀ ಗುರು ರಾಜ್ ಎಂ ಶೆಟ್ಟಿ, ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ದಯಾನಂದ ಕೋಟ್ಯಾನ್, ಜಿಲ್ಲಾ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಬಿ.ಕೆ ಶ್ರೀನಿವಾಸ್,ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದ ಶ್ರೀ ಡಾ.ವಿಷ್ಣುಮೂರ್ತಿ ಪ್ರಭು ಸಹ ಪ್ರಾಧ್ಯಾಪಕರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಹಲವಾರು ಉಪಯುಕ್ತ ಮಾಹಿತಿಗಳನ್ನು ನೀಡಿದರು. ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ದಯಾನಂದ ಕೋಟ್ಯಾನ್ ಮಾತನಾಡಿ ಆಗಸ್ಟ್ 10ರಂದು ಉಡುಪಿ ಜಿಲ್ಲಾ ಸಮಾವೇಶ ದ ಪೂರ್ವ ತಯಾರಿ ಕುರಿತು ವಿವರಿಸಿ ಕರಪತ್ರವನ್ನು ಬಿಡುಗಡೆಗೊಳಿಸಿದರು. ಕ್ಷೇತ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ದಯಾನಂದ ಪ್ರಭು ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ಕೋಶಾಧಿಕಾರಿ ಬಾಲಕೃಷ್ಣ ನಾಯ್ಕ್ ವಂದಿಸಿದರು.

ಜೂ.26ರಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರಿಗೆ ಪೌರ ಸನ್ಮಾನ  ಎಮ್ ಸಮೀವುಲ್ಲಾ*

ಅರಸೀಕೆರೆ: ಕ್ಷೇತ್ರದ ಅಭಿ ವೃದ್ಧಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ ರ್ ಸೇರಿದಂತೆ ಸಚಿವರಿಗೆ ಹಾಗೂ ಗಣ್ಯರಿಗೆ ನಗರದ ಮಹಾಜನತೆ ಪರವಾಗಿ ನಗರಸಭೆ ಆಡಳಿತದಿಂ ದ ಜುಲೈ 26ರಂದು ಪೌರ ಸನ್ಮಾನ ಹಮ್ಮಿಕೊಳ್ಳಲಾಗಿದೆ ಎಂದು ನಗರಸಭೆ ಅಧ್ಯಕ್ಷ ಎಂ. ಸಮೀವುಲ್ಲಾ ಹೇಳಿದರು.

ನಗರಸಭೆ ಸಭಾಂಗಣದಲ್ಲಿ ಶಾಸಕರು ಹಾಗೂ ರಾಜ್ಯ ಗೃಹ ಮಂಡಳಿ ಅಧ್ಯಕ್ಷರಾದ ಕೆ.ಎಂ. ಶಿವಲಿಂಗೇಗೌಡರ ಉಪಸ್ಥಿತಿಯಲ್ಲಿ ನಡೆದ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ನಗರದ ರೈಲ್ವೆ ನಿಲ್ದಾಣ ರಸ್ತೆ ಮತ್ತು ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣ ಹೊಂದಿಕೊಂಡಂತೆ ಇರುವ ನಗರಸಭೆ ಸ್ಥಳದಲ್ಲಿ ಜಗಜ್ಯೋತಿ ಬಸವೇಶ್ವರ ಪ್ರತಿಮೆ ಹಾಗೂ ಸಂತ ಮೇರಿ ಶಾಲೆ ಬಳಿ ಕನಕದಾಸರ ಪ್ರತಿಮೆ ಸ್ಥಾಪಿಸಲಾಗುತ್ತಿದೆ.

ಕಂತೆನಹಳ್ಳಿಯ ಅರಸೀ ಉದ್ಯಾನವನದಲ್ಲಿ ನಿರ್ಮಾಣ ಮಾಡಿರುವ ನೂತನ ಈಜುಕೊಳ, ಸಂತೆ ಮೈದಾನದಲ್ಲಿ ನಿರ್ಮಾಣ ಮಾಡಿರುವ ವಾಣಿಜ್ಯ ಸಂಕೀರ್ಣ.

ಯಾದಾಪುರ ರಸ್ತೆ ಬಲಭಾಗದ ಪ್ರದೇಶದಲ್ಲಿ ನಿರ್ಮಿಸಲಾದ ಜಿ-ಪ್ಲಸ್ ಒನ್ ಯೋಜನೆಯ 1188 ಮನೆಗಳ ಪೈಕಿ 300ಅರ್ಹರ ಫಲಾನುಭವಿಗಳಿಗೆ ನೂತನ ಮನೆಗಳ ಹಸ್ತಾಂತರ ಮುಖ್ಯ ಮಂತ್ರಿ ಅವರಿಂದ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳು ಸೇರಿದಂತೆ ಇನ್ನಿತರೆ ಅಭಿವೃದ್ಧಿ ಕಾರ್ಯಗಳ ಅನುಷ್ಠಾನ ಮತ್ತು ಮುಖ್ಯಮಂತ್ರಿ ಅವರ ಕಾರ್ಯ ಕ್ರಮ ಯಶಸ್ವಿ ಬಗ್ಗೆ ಸಮಾಲೋ ಚಿಸಲು ಇಂದು ವಿಶೇಷ ಸಭೆ ಕರೆಯಲಾಗಿದೆ ಎಂದರು.

ನಗರದ ಅಭಿವೃದ್ಧಿಗೆ ಸ್ಪಂದಿಸಿ ದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸೇರಿದಂತೆ ಸಚಿವರಿಗೆ ನಗರಸಭೆ ಆಡಳಿತ ‘ದಿಂದ ನಾಗರಿಕ ಸನ್ಮಾನ ಆಯೋಜಿಸಿರುವುದು ಸ್ವಾಗತ ರ್ಹವಾಗಿದೆ. ಕ್ಷೇತ್ರದ ಅಭಿವೃದ್ಧಿ

ಕಾರ್ಯಗಳಿಗೆ ಅನುದಾನ ಬಿಡುಗಡೆ ಮಾಡಿಸುವುದು ನನ್ನ ಕರ್ತವ್ಯವಾಗಿದ್ದು, ಜನತೆ ಇಟ್ಟಿರುವ ನಂಬಿಕೆಗೆ ಕ್ಷೇತ್ರಕ್ಕೆ ಅಭಿವೃದ್ಧಿ ಮಾಡಿಸುತ್ತಿರುವ ಬಗ್ಗೆ ಹೆಮ್ಮೆ ನನಗಿದೆ. ಅರಸೀಕೆರೆ ನಗರವು ಆರ್ಥಿಕ ವಹಿವಾಟಿನಲ್ಲಿ ನಿರತ ಪತ್ರಕರ್ತರ ಭವನ ನಿರ್ಮಾ ಣಕ್ಕೆ ಸರ್ಕಾರವು ನಿವೇಶನ ಮಂಜೂರು ಮಾಡಿದ್ದು, ಕಟ್ಟಡ ಈ ಮಾದರಿ ನಗರವಾಗಿದೆ. ಕಾರ್ಯ ಅವರು ಅನುದಾನ ಘೋಷಣೆ : ನಿರ್ಮಾಣಕ್ಕೆ ಮುಖ್ಯ ಮಂತ್ರಿ ಮಾಡುವ ಸಂಭವ ವಿದ್ದು, ಆ ನಿಟ್ಟಿನಲ್ಲಿ ಸಂಗವು ಪೂರ್ವ ಸಿದ್ಧತೆ ಮಾಡಿಕೊಳ್ಳ ಬೇಕು. ಜುಲೈ : 26 ಮುಖ್ಯಮಂತ್ರಿ   ಕಾರ್ಯಕ್ರಮಕ್ಕೆ ನಗರಸಭೆ ಸರ್ವ ಸದಸ್ಯರು ತಮ್ಮ ವಾರ್ಡ್ಗಳ ಜನತ “ಯೊಂದಿಗೆ ಅಧಿಕ ಸಂಖ್ಯೆಯಲ್ಲಿ ಸ್ವಯಂ ಪ್ರೇರಣೆಯಿಂದ ಆಗಮಿ ಸಬೇಕೆಂದು ಮನವಿ ಮಾಡಿದರು..

ಹಾಸನ ಅರ್ಹರಿಗೆ ಸರ್ಕಾರಿ ಸೌಲಭ್ಯವನ್ನು ಒದಗಿಸಿ : ಜಿಲ್ಲಾಧಿಕಾರಿ ಲತಾ ಕುಮಾರಿಹಾಸನ          ಪೌತಿ ಖಾತೆ ಆಂದೋಲನದ ಜೊತೆಗೆ ಪಿಂಚಣಿ ಆಂದೋಲನ ಕೂಡಾ ನಡೆಸಿ ಕೈಬಿಟ್ಟು ಹೋಗಿರುವವರನ್ನು ಗುರುತಿಸಿ ಅರ್ಹರಿಗೆ ಸರ್ಕಾರಿ ಯೋಜನೆಗಳ ಸೌಲಭ್ಯವನ್ನು ಒದಗಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದರು..

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಿ ಮಾತನಾಡಿದ ಅವರು ಕೆರೆ, ಗೋಮಾಳ ಮತ್ತು ಸ್ಮಶಾನ ಒತ್ತುವರಿಯನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲು…

ಅರಸೀಕೆರೆ ತಾಲೂಕಿನ ತೆಂಗು ಬೆಳೆಗಳಿಗೆ ರೋಗದಿಂದಾಗಿ ರೈತರು ನಷ್ಟ ಅನುಭವಿಸುತ್ತಿದ್ದು ಕೇಂದ್ರ ಹಾಗೂ ರಾಜ್ಯ ಸರ್ಕಾರ ಪರಿಹಾರಕ್ಕೆ ಧಾವಿಸುವಂತೆ ಗೃಹ ಮಂಡಳಿ ಅಧ್ಯಕ್ಷ ಶಾಸಕ ಶಿವಲಿಂಗೇಗೌಡರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿತೆಂಗು ಬೆಳೆಯ ವಿಸ್ತೀರ್ಣದಲಿ, ಹಾಸನ ಜಿಲ್ಲೆಯು ಎರಡನೇ ಸ್ಥಾನದಲ್ಲಿದ್ದು ಒಟ್ಟು 1.18 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆಯನ್ನು ಬೆಳೆಯಲಾಗುತ್ತಿದೆ. ಈ ಪ್ರದೇಶದಲ್ಲಿ ಆರಸೀಕೆರೆ ತಾಲೂಕಿನಲ್ಲಿ ಒಟ್ಟು 56473 ಹೆಕ್ಟರ್ ವಿಶ್ರಾಣದಲ್ಲಿ ಬೆಳೆಯುವ ಪ್ರದೇಶದಲ್ಲಿ ಮುಂಚೂಣಿಯಲ್ಲಿರುತ್ತದೆ.

ಒಟ್ಟು 56473 ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆಯುತ್ತಿದ್ದರು ಸಹ ಬಹುತೇಕ ಶೇಕಡ 90ರಷ್ಟು ಪ್ರದೇಶದಲ್ಲಿ, ತೆಂಗಿನ ಬೆಳೆಯ ಇಳುವರಿಯಲ್ಲಿ ಗಣನೀಯ ಪ್ರಮಾಣದ ಇಳಿಮುಖ ಕಂಡು ಬಂದಿರುತ್ತದೆ. ಕಳೆದ…

- Advertisement -
Ad image