ಉಮೇಶ್ ಬಾಣಾವರ

ಉಮೇಶ್ ಬಾಣಾವರ

360 Articles

ರಸಗೊಬ್ಬರದ ಕೊರತೆ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ವತಿಯಿಂದ : ಹಾಸನ ನಗರದ ಕೃಷಿ ಜಂಟಿ ನಿರ್ದೇಶಕರ ಕಚೇರಿ ಎದುರು ನಡೆದ ಬೃಹತ್ ಪ್ರತಿಭಟನೆ :

ಬೇಡಿಕೆ ತಲುಪದ ಪೂರೈಕೆ

ಜಿಲ್ಲೆಯಲ್ಲಿ ಆಗಾಗ ‌ಸುರಿಯುತ್ತಿರುವ ಧಾರಾಕಾರ, ಸಾಧಾರಣ ಹಾಗೂ ಜಡಿಮಳೆಯು ಬಿತ್ತನೆ ಚಟುವಟಿಕೆಗೆ ಮತ್ತಷ್ಟು ಹುರುಪು ನೀಡಿದೆ. ಇದರ ಜೊತೆಗೆ ವಿವಿಧ ರಸಗೊಬ್ಬರಗಳಿಗೂ ರೈತರಿಂದ ಬೇಡಿಕೆ ಹೆಚ್ಚಾಗಿದೆ. ಆದರೆ, ಜಿಲ್ಲೆಗೆ ಬೇಡಿಕೆ ಇರುವಷ್ಟು ರಸಗೊಬ್ಬರವು ಸರಬರಾಜು ಆಗಿಲ್ಲ. ಕೆಲ ಗೊಬ್ಬರಗಳ ಕೊರತೆ ಎದುರಾಗಿದೆ.
ಕೇಂದ್ರ ಸರ್ಕಾರ ಸಮರ್ಪಕವಾಗಿ ನೀಡಿರುವ ರಸಗೊಬ್ಬರವನ್ನು ಸರಿಯಾಗಿ ರೈತರಿಗೆ ಹಂಚಿಕೆ ಮಾಡದ ರೈತವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ವತಿಯಿಂದ ಹಾಸನ ನಗರದ ಕೃಷಿ ಜಂಟಿ ನಿರ್ದೇಶಕರ ಕಚೇರಿ ಎದುರು ನಡೆದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ರೈತರಿಗೆ ಅನ್ಯಾಯವೆಸಗುತ್ತಿರುವ ರಾಜ್ಯ ಸರ್ಕಾರದ ಬೇಜವಾಬ್ದಾರಿತನವನ್ನು ಖಂಡಿಸಿ ರಾಜ್ಯ ಸರ್ಕಾರ ನಿರ್ಲಕ್ಷೆ ವಹಿಸದೆ ತಕ್ಷಣದಿಂದಲೇ ರೈತರು ಅನುಭವಿಸುತ್ತಿರುವ ತೊಂದರೆಯನ್ನು ನಿವಾರಿಸಬೇಕೆಂದರು.
ಪ್ರತಿಭಟನೆಯಲ್ಲಿ ಬೇಲೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಕೆ ಸುರೇಶ್ ರವರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ರೈತ ಮೋರ್ಚಾ ಜಿಲ್ಲಾ ಪದಾಧಿಕಾರಿಗಳು, ತಾಲ್ಲೂಕು ಅಧ್ಯಕ್ಷರುಗಳು, ಇನ್ನಿತರ ಮುಖಂಡರು, ರೈತರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು

ವರದಿ: ಭರತ್ ಮಲ್ನಾಡ್

ಅರಸೀಕೆರೆ ತಾಲೂಕಿನ ಮಾಡಾಳು ಗ್ರಾಮದ ಮೂಲಸ್ಥಾನ ಸ್ವರ್ಣ ಗೌರಮ್ಮ ದೇವಿ ನೂತನ ದೇವಾಲಯದ ಕಟ್ಟಡ ಕಾಮಗಾರಿಗೆ ಹಾರನಹಳ್ಳಿ ಸುಕ್ಷೇತ್ರ ಕೊಡಿ ಮಠದ ಉತ್ತರಾಧಿಕಾರಿ ಶ್ರೀ ಚೇತನ್ ಮರಿದೇವರ ಪಾದಪೂಜೆಯೊಂದಿಗೆ ನೂರಾರು ಭಕ್ತರ ಸಮ್ಮುಖದಲ್ಲಿ ಶ್ರಾವಣ ಪಂಚಮಿ ಸೋಮವಾರದಂದು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಶಾಸ್ತ್ರೋತ್ರವಾಗಿ ನೆರವೇರಿತು ಹಾರನಹಳ್ಳಿ ಕೋಡಿ ಮಠ ಮಹಾಸಂಸ್ಥಾನದ ವತಿಯಿಂದ ಜಗದ್ಗುರು ಡಾ ಶ್ರೀ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳವರ ಸಂಕಲ್ಪದಂತೆ ಭಕ್ತರ ಸಮರ್ಪಣಾ ಮನೋಭಾವ ಹಾಗೂ ಆಶಯದಂತೆ ಸುಮಾರು ಅಂದಾಜು 1.50 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಪೂಜಾ ವಿಧಿ ವಿಧಾನಗಳ ನಂತರ ಮಾತನಾಡಿದ ಶ್ರೀ ಗಳು ಸತ್ಯ ಶುದ್ಧ ಕಾಯಕದೊಂದಿಗೆ ಮನುಷ್ಯ ಜೀವನ ನಡೆಸಬೇಕು ಧರ್ಮ ಆಚರಣೆಯಿಂದ ವಿಮುಖನಾದರೆ ಅಪಾಯ ತಪ್ಪಿದ್ದಲ್ಲ ಎಂದು ಹೇಳಿದರು ಶಾಂತಿ ನೆಮ್ಮದಿ ಸಮೃದ್ಧಿ ಬದುಕಿಗಾಗಿ ಧರ್ಮಾಚರಣೆ ಅಗತ್ಯ ಎಂದು ಸ್ವಾಮೀಜಿ ಪ್ರತಿಪಾದಿಸಿದರು. ಇಂದು ಎಲ್ಲಾ ರಂಗಗಳಲ್ಲಿ ಧಾರ್ಮಿಕ ಸಾಮಾಜಿಕ ಸಂಬಂಧಗಳು ಶಿಥಿಲಗೊಂಡು ಉಳಿಯುತ್ತಿಲ್ಲ ಆದ್ದರಿಂದ ಸತ್ಯದ ತಳಹದಿಯ ಮೇಲೆ ಹಾಗೂ ಸೈದ್ಧಾಂತಿಕ ನೆಲಗಟ್ಟಿನಡಿ ಗಟ್ಟಿಗೊಳಿಸಬೇಕಾಗಿದೆ ಅಂದುಕೊಂಡಂತೆ ಎಲ್ಲಾ ಕೆಲಸಗಳು ಆದರೆ ಕೋಡಿಮಠ ಶ್ರೀಗಳ ಮಾರ್ಗದರ್ಶನದಲ್ಲಿ ಮುಂದಿನ ಶ್ರಾವಣದ ಪಂಚಮಿಯಂದು ನೂತನ ದೇವಾಲಯದಲ್ಲಿ ಸ್ವರ್ಣ ಗೌರಮ್ಮ ದೇವಿಯು ದರ್ಶನ ನೀಡುವಳು ಎಂದು ಹೇಳಿದರು. ಗೌರಮ್ಮ ದೇವಿಮೂಲ ಸನ್ನಿಧಿಯಲ್ಲಿ ಶ್ರೀಗಳವರ ಇಷ್ಟಲಿಂಗ ಪೂಜೆ ಮತ್ತು ಮುತ್ತೈದೆಯವರಸೇವೆಯನ್ನು ಮಹಿಳೆಯರು ಶ್ರದ್ಧಾ ಭಕ್ತಿಯಿಂದ ನೆರವೇರಿಸಿದರು.

ಸಕಲೇಶಪುರ….ಅರಣ್ಯ ಇಲಾಖೆ ಮಿಂಚಿನ ಕಾರ್ಯಾಚರಣೆ : ಅಕ್ರಮ ಮರ ಸಾಗಾಟ ದಿಮ್ಮಿಗಳ ಸಮೇತ ವಾಹನ ವಶಸಕಲೇಶಪುರ: ಅಕ್ರಮ ಮರ ಸಾಗಾಟ ಮಾಡುತ್ತಿದ್ದ ವಾಹನ ಸಮೇತ ಮರದ ದಿಮ್ಮಿ ವಶಕ್ಕೆ ಪಡೆದ ಅರಣ್ಯ ಇಲಾಖೆಸಕಲೇಶಪುರ ತಾಲೂಕು ಯಡೆಹಳ್ಳಿ ಪ್ಲಾಂಟರ್ಸ್ ಕ್ಲಬ್ ಹತ್ತಿರ ಕಾಡು ಜಾತಿಯ ಬಿಲೆಟ್ಸ್ ಗಳನ್ನು ಅಕ್ರಮ ಸಾಗಾಟದಲ್ಲಿದ್ದ ಎರಡು ವಾಹನಗಳನ್ನು ಅರಣ್ಯ ಇಲಾಖೆ ವಾಹನ ಸಮೇತ ಮರದ ದಿಮ್ಮಿ ವಶಕ್ಕೆ ಪಡೆದಿದ್ದಾರೆ. KA 13 4225 ಹಾಗು ಮತ್ತೊಂದು ವಾಹನದಲ್ಲಿ ದಿಮ್ಮಿಗಳನ್ನು ವಶಪಡಿಸಿಕೊಂಡು ಸರ್ಕಾರಿ ನಾಟ -ಸಂಗ್ರಹಾಲಯಕ್ಕೆ ಸಾಗಿಸಲಾಗಿದೆ.

ಆರ್.ಎಫ್.ಓ ಹೇಮತ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಅರಣ್ಯಾಧಿಕಾರಿಗಳಾದ ಮಂಜುನಾಥ್. ಮಹಾದೇವಪ್ಪ. ಲೋಕೇಶ್ . ಜೈ ಸ್ವಾಮಿ ಇವರುಗಳ ತಂಡ ದಿಮ್ಮಿ ವಶಪಡಿಸುವಲ್ಲಿ ಯಶಸ್ವಿಯಾಗಿದೆ. ವರದಿ :ಭರತ್…

ಅಂಬೇಡ್ಕರ್ ಭವನ ಅಭಿವೃದ್ಧಿ ಹಾಗು ಮೂಲಭೂತ ಸೌಕರ್ಯದ ಸಭೆ.

ಸಕಲೇಶಪುರ : ನಗರದ ಸಮಾಜ ಕಲ್ಯಾಣ ಇಲಾಖೆ ಕಛೇರಿಯಲ್ಲಿ ಸಕಲೇಶಪುರ ಶಾಸಕರಾದ ಸಿಮೆಂಟ್ ಮಂಜು ರವರು ಅಂಬೇಡ್ಕರ್ ಭವನದ ಅಭಿವೃದ್ಧಿ ಮತ್ತು ಮೂಲಭೂತ ಸೌಕರ್ಯಗಳ ಕುರಿತು ಸಭೆ…

ಮಳೆ ಅವಘಡ:ಸೂರಿಗಾಗಿ ಅಂಗಲಾಚುತ್ತಿರುವ ಕುಟುಂಬಗಳಿಗೆ ಪರಿಹಾರ ಮತ್ತು ನಿವೇಶನಕ್ಕೆ ಒತ್ತಾಯ..

ಸಕಲೇಶಪುರ : ಬಾರಿ ಮಳೆ ಗಾಳಿಗೆ ಬಡ ಕುಟುಂಬಗಳು ಸೂರಿಗಾಗಿ ಅಂಗಲಾಚುತ್ತಿವೆ. ಮಲೆನಾಡು ಭಾಗದ ಜನರ ಜೀವನ ಅಸ್ತವ್ಯಸ್ತ. ಸಕಲೇಶಪುರ ತಾಲ್ಲೂಕು ಯಶಳೂರು ಹೋಬಳಿಯ ಬಾಣಗೆರೆ ಗ್ರಾಮದಕವಿತಾ…

ಮೊದಲ ಬಾರಿಗೆ ಸರ್ಕಾರದ ಆದೇಶದಂತೆ ಕೌನ್ಸಿಲಿಂಗ್ ಮೂಲಕ ವರ್ಗಾವಣೆ
ಹಾಸನ    ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮ ಪಂಚಾಯತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-1, ಗ್ರೇಡ್-2 ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರುಗಳ 2025-26 ನೇ ಸಾಲಿನಲ್ಲಿ ಸಾರ್ವತ್ರಿಕ ವರ್ಗಾವಣೆಯನ್ನು ಆನ್‌ಲೈನ್ ಕೌನ್ಸಿಲಿಂಗ್ ಮೂಲಕ ಮಾಡಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಪ್ರಾಧಿಕಾರಿಗಳನ್ನಾಗಿಸಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಅದರಂತೆ ಜಿಲ್ಲಾ ಪಂಚಾಯಿತಿ ಕಾರ್ಯಾಲಯದಲ್ಲಿಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್ ಪೂರ್ಣಿಮಾರವರ ಅಧ್ಯಕ್ಷತೆಯಲ್ಲಿ 2024-25 ನೇ ಸಾಲಿನಲ್ಲಿ ಹೊರಡಿಸಿದ ಅಧಿಸೂಚನೆಯಂತೆ ಜಿಲ್ಲಾ ಮಟ್ಟದ ಕೌನ್ಸಿಲಿಂಗ್ ವರ್ಗಾವಣೆಗೆ ಸಂಬAಧಿಸಿದ ನೌಕರರುಗಳು ವರ್ಗಾವಣೆ ಬಯಸಿದ ಸ್ಥಳಗಳಿಗೆ ಕೌನ್ಸಿಲಿಂಗ್ ನಡೆಸಲಾಯಿತು.

ಜು.25 ರಂದು ವಿಶೇಷ ಪ್ರಕರಣಗಳಾದ ಅಂಗವಿಕಲತೆ ಮತ್ತು ದೈಹಿಕ ಅಸಮರ್ಥತಾ ಪ್ರಕರಣಗಳು, ಪತಿ- ಪತ್ನಿ ಪ್ರಕರಣಗಳು ಮತ್ತು 12 ವರ್ಷದೊಳಗಿನ ಮಕ್ಕಳಿರುವ ಒಂಟಿ ಪೋಷಕರು / ಒಂಟಿ ಮಹಿಳೆ / ವಿಕಲಚೇತನ ಮಕ್ಕಳಿರುವ ಪೋಷಕರುಗಳಿಗೆ ಶೇ.3 ರ ಮಿತಿಯಲ್ಲಿ ನಡೆಸಲಾಯಿತು.

ಜು.,28 ರ ಪೂರ್ವಾಹ್ನ ವಿಶೇಷ ವರ್ಗಾವಣಾ ಪ್ರಕರಣಗಳಿಂದ ಬಾಧಿತರಾದ ನೌಕರರುಗಳಿಗೆ ಹಾಗೂ ಸಾಮಾನ್ಯ ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ಶೇ.3 ರ ಮಿತಿಯಲ್ಲಿ ಹಾಗೂ ಜು.29 ರಂದು 5 ವರ್ಷಕ್ಕಿಂತ ಹೆಚ್ಚಿನ ಅವಧಿಯಲ್ಲಿ ಒಂದೇ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರುಗಳಿಗೆ ಶೇ.6 ರ ಮಿತಿಯಲ್ಲಿ ಪಾರದರ್ಶಕವಾಗಿ ನಿಯಮಾನುಸಾರ ವರ್ಗಾವಣೆ ಕೌನ್ಸಿಲಿಂಗ್ ನಡೆಸಲಾಯಿತು.

ಈ ವೇಳೆಯಲ್ಲಿ ಕೌನ್ಸಿಲಿಂಗ್ ಮೂಲಕ ವರ್ಗಾವಣೆಯಾದ ಸಂಬAಧಪಟ್ಟ ನೌಕರರಿಗೆ ವರ್ಗಾವಣೆ ಆದೇಶವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿಯ ಉಪಕಾರ್ಯದರ್ಶಿ (ಅಭಿವೃದ್ಧಿ)ಗಳಾದ ಕೆ.ಹೆಚ್ ಕೃಷ್ಣಮೂರ್ತಿ ಯವರು ಉಪಸ್ಥಿತರಿದ್ದರು.

ಮೈಸೂರು ಜಿಲ್ಲೆಯ ಸಚಿವರು ಹಾಗೂ ಶಾಸಕರ ಜೊತೆ ಸಭೆ ನಡೆಸಿ, ಜಿಲ್ಲಾ ವ್ಯಾಪ್ತಿಯ ಅಭಿವೃದ್ಧಿ ಕಾರ್ಯಗಳ ಬಗ್ಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾಲೋಚನೆ ನಡೆಸಿದರು.

ಸಭೆಯಲ್ಲಿ ಚರ್ಚಿಸಲಾದ ಪ್ರಮುಖ ವಿಷಯಗಳು:ಮೈಸೂರು ಜಿಲ್ಲೆಯಲ್ಲಿ ಪ್ರಮುಖವಾಗಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳ ಸ್ಥಿತಿಗತಿ, ಕೃಷಿ ಚಟುವಟಿಕೆಗಳು ಮತ್ತು ಬಿಡುಗಡೆಯಾಗಿರುವ ಅನುದಾನದಲ್ಲಿ ಖರ್ಚಾಗಿರುವ ಹಣದ ಪ್ರಮಾಣ, ನಿಗದಿತ ಅವಧಿಯೊಳಗೆ…

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಶಿಯೇಶನ್ ಸಂಸ್ಥೆಯಿಂದ ಮುಖ್ಯಮಂತ್ರಿಗಳಿಗೆ ಮತ್ತು ಕಾರ್ಮಿಕ ಸಚಿವರಿಗೆ ಪತ್ರ.

ಇತ್ತೀಚಿಗೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನಲ್ಲಿ ನಡೆದ ಸರ್ಕಾರಿ ವಿವಿಧ ಇಲಾಖೆಗಳ ಕಾಮಗಾರಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಹಾಗೂ ಪಲಾನುಭವಿಗಳಿಗೆ  ವಿವಿಧ ಯೋಜನೆಗಳಲ್ಲಿ ಸವಲತ್ತುಗಳ ವಿತರಣೆ ಕಾರ್ಯಕ್ರಮದಲ್ಲಿ…

- Advertisement -
Ad image