ರಾಜ್ಯ

ಮೊದಲ ಬಾರಿಗೆ ಸರ್ಕಾರದ ಆದೇಶದಂತೆ ಕೌನ್ಸಿಲಿಂಗ್ ಮೂಲಕ ವರ್ಗಾವಣೆ
ಹಾಸನ    ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮ ಪಂಚಾಯತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-1, ಗ್ರೇಡ್-2 ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರುಗಳ 2025-26 ನೇ ಸಾಲಿನಲ್ಲಿ ಸಾರ್ವತ್ರಿಕ ವರ್ಗಾವಣೆಯನ್ನು ಆನ್‌ಲೈನ್ ಕೌನ್ಸಿಲಿಂಗ್ ಮೂಲಕ ಮಾಡಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಪ್ರಾಧಿಕಾರಿಗಳನ್ನಾಗಿಸಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಅದರಂತೆ ಜಿಲ್ಲಾ ಪಂಚಾಯಿತಿ ಕಾರ್ಯಾಲಯದಲ್ಲಿಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್ ಪೂರ್ಣಿಮಾರವರ ಅಧ್ಯಕ್ಷತೆಯಲ್ಲಿ 2024-25 ನೇ ಸಾಲಿನಲ್ಲಿ ಹೊರಡಿಸಿದ ಅಧಿಸೂಚನೆಯಂತೆ ಜಿಲ್ಲಾ ಮಟ್ಟದ ಕೌನ್ಸಿಲಿಂಗ್ ವರ್ಗಾವಣೆಗೆ ಸಂಬAಧಿಸಿದ ನೌಕರರುಗಳು ವರ್ಗಾವಣೆ ಬಯಸಿದ ಸ್ಥಳಗಳಿಗೆ ಕೌನ್ಸಿಲಿಂಗ್ ನಡೆಸಲಾಯಿತು.

ಜು.25 ರಂದು ವಿಶೇಷ ಪ್ರಕರಣಗಳಾದ ಅಂಗವಿಕಲತೆ ಮತ್ತು ದೈಹಿಕ ಅಸಮರ್ಥತಾ ಪ್ರಕರಣಗಳು, ಪತಿ- ಪತ್ನಿ ಪ್ರಕರಣಗಳು ಮತ್ತು 12 ವರ್ಷದೊಳಗಿನ ಮಕ್ಕಳಿರುವ ಒಂಟಿ ಪೋಷಕರು / ಒಂಟಿ ಮಹಿಳೆ / ವಿಕಲಚೇತನ ಮಕ್ಕಳಿರುವ ಪೋಷಕರುಗಳಿಗೆ ಶೇ.3 ರ ಮಿತಿಯಲ್ಲಿ ನಡೆಸಲಾಯಿತು.

ಜು.,28 ರ ಪೂರ್ವಾಹ್ನ ವಿಶೇಷ ವರ್ಗಾವಣಾ ಪ್ರಕರಣಗಳಿಂದ ಬಾಧಿತರಾದ ನೌಕರರುಗಳಿಗೆ ಹಾಗೂ ಸಾಮಾನ್ಯ ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ಶೇ.3 ರ ಮಿತಿಯಲ್ಲಿ ಹಾಗೂ ಜು.29 ರಂದು 5 ವರ್ಷಕ್ಕಿಂತ ಹೆಚ್ಚಿನ ಅವಧಿಯಲ್ಲಿ ಒಂದೇ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರುಗಳಿಗೆ ಶೇ.6 ರ ಮಿತಿಯಲ್ಲಿ ಪಾರದರ್ಶಕವಾಗಿ ನಿಯಮಾನುಸಾರ ವರ್ಗಾವಣೆ ಕೌನ್ಸಿಲಿಂಗ್ ನಡೆಸಲಾಯಿತು.

ಈ ವೇಳೆಯಲ್ಲಿ ಕೌನ್ಸಿಲಿಂಗ್ ಮೂಲಕ ವರ್ಗಾವಣೆಯಾದ ಸಂಬAಧಪಟ್ಟ ನೌಕರರಿಗೆ ವರ್ಗಾವಣೆ ಆದೇಶವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿಯ ಉಪಕಾರ್ಯದರ್ಶಿ (ಅಭಿವೃದ್ಧಿ)ಗಳಾದ ಕೆ.ಹೆಚ್ ಕೃಷ್ಣಮೂರ್ತಿ ಯವರು ಉಪಸ್ಥಿತರಿದ್ದರು.

ಮೈಸೂರು ಜಿಲ್ಲೆಯ ಸಚಿವರು ಹಾಗೂ ಶಾಸಕರ ಜೊತೆ ಸಭೆ ನಡೆಸಿ, ಜಿಲ್ಲಾ ವ್ಯಾಪ್ತಿಯ ಅಭಿವೃದ್ಧಿ ಕಾರ್ಯಗಳ ಬಗ್ಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾಲೋಚನೆ ನಡೆಸಿದರು.

ಸಭೆಯಲ್ಲಿ ಚರ್ಚಿಸಲಾದ ಪ್ರಮುಖ ವಿಷಯಗಳು:ಮೈಸೂರು ಜಿಲ್ಲೆಯಲ್ಲಿ ಪ್ರಮುಖವಾಗಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳ ಸ್ಥಿತಿಗತಿ, ಕೃಷಿ ಚಟುವಟಿಕೆಗಳು ಮತ್ತು ಬಿಡುಗಡೆಯಾಗಿರುವ ಅನುದಾನದಲ್ಲಿ ಖರ್ಚಾಗಿರುವ ಹಣದ ಪ್ರಮಾಣ, ನಿಗದಿತ ಅವಧಿಯೊಳಗೆ…

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಶಿಯೇಶನ್ ಸಂಸ್ಥೆಯಿಂದ ಮುಖ್ಯಮಂತ್ರಿಗಳಿಗೆ ಮತ್ತು ಕಾರ್ಮಿಕ ಸಚಿವರಿಗೆ ಪತ್ರ.

ಇತ್ತೀಚಿಗೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನಲ್ಲಿ ನಡೆದ ಸರ್ಕಾರಿ ವಿವಿಧ ಇಲಾಖೆಗಳ ಕಾಮಗಾರಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಹಾಗೂ ಪಲಾನುಭವಿಗಳಿಗೆ  ವಿವಿಧ ಯೋಜನೆಗಳಲ್ಲಿ ಸವಲತ್ತುಗಳ ವಿತರಣೆ ಕಾರ್ಯಕ್ರಮದಲ್ಲಿ…

ಮನೆ ಮನೆಗೆ ಪೊಲೀಸ್ 2025 ಎಂಬ ರಾಜ್ಯ ಸರ್ಕಾರದ ಯೋಜನೆಯನ್ನು ಇಂದು ಕಡೂರಿನಲ್ಲಿ ಜಾರಿಗೆ ತರಲಾಯಿತು.

ಇದೇ ಮೊದಲ ಬಾರಿಗೆ ಮನೆ ಮನೆಗೆ ಪೊಲೀಸ್‌ ಎಂಬ ಯೋಜನೆಯನ್ನು ರಾಜ್ಯ ಸರ್ಕಾರ ರೂಪಿಸಿದೆ, ಈ ಕಾರ್ಯಕ್ರಮದ ಉದ್ದೇಶ, ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ…