ರಾಜ್ಯ

ಅರಸಿಕೆರೆಯಲ್ಲಿ ಶನಿವಾರ ನಡೆಯಲಿರುವ ಮುಖ್ಯಮಂತ್ರಿ ಉಪ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಶುಭ ಹಾರೈಸಿ ಭಾವಸಾರ ಕ್ಷತ್ರಿಯ ಸಮಾಜದ ಕಾರ್ಯದರ್ಶಿಗಳಾದ ಕೆ ಹೇಮಂತ್ ಮಾತನಾಡಿ ಅರಸೀಕೆರೆ ನಗರದ ಶ್ರೀ ರುಕ್ಮಿಣಿ ಪಾಂಡುರಂಗ ಸ್ವಾಮಿ ಸಮುದಾಯ ಭವನ ನಿರ್ಮಾಣ ಮಾಡುವಲ್ಲಿ  ಅತಿ ಹೆಚ್ಚು ಸಹಕಾರ ನೀಡಿ ಸರ್ಕಾರದ ಅನುದಾನ ಕೊಡಿಸುವಲ್ಲಿ ಕರ್ನಾಟಕ ರಾಜ್ಯ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಅರಸೀಕೆರೆ ಕ್ಷೇತ್ರದ ಶಾಸಕರಾದ ಕೆಎಂ ಶಿವಲಿಂಗೇಗೌಡರು ಅತಿ ಹೆಚ್ಚು ಶ್ರಮವಹಿಸಿದ್ದಾರೆ  ಮತ್ತು ನಗರಸಭೆಯ ಅಧ್ಯಕ್ಷರಾದ  ಎಂ ಸಮೀವುಲ್ಲಾ  ರವರು ಪ್ರತಿ ಹಂತದಲ್ಲೂ ಸಹ  ಹೆಚ್ಚಿನ ಸಹಕಾರ ನೀಡಿದ್ದು  ನಮ್ಮ ಅರಸಿಕೆರೆ ಭಾವಸಾರ ಕ್ಷತ್ರಿಯ ಸಮಾಜದ ವತಿಯಿಂದ  ನಾಳೆ ನಡೆಯಲಿರುವ ಕಾರ್ಯಕ್ರಮಕ್ಕೆ ಶುಭ ಹಾರೈಸಲಿದ್ದು ಈ ಸಮಾರಂಭದಲ್ಲಿ ನಮ್ಮ ಸಮಾಜದ ವತಿಯಿಂದ  ಹೆಚ್ಚಿನ  ಸಂಖ್ಯೆಯಲ್ಲಿ  ಭಾಗವಿಸಲಿದ್ದೇವೆ ಎಂದು ಎಂದು ಕೆ ಹೇಮಂತ ತಿಳಿಸಿದರು ಭಾವಸಾರ ಕ್ಷತ್ರಿಯ ಸಮಾಜದ ಅಧ್ಯಕ್ಷರಾದ ನರೇಶ್ ನಾಜರೇ. ಕರ್ನಾಟಕ ಟೈಲರ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಲಕ್ಷ್ಮಣ್ ರಾವ್. ರಾಜೇಶ್ ಶೆಂಡಿಗೆ. ವಾವಳೆ ಮಂಜುನಾಥ್. ಪೆಟ್ಕರ್ ಯೋಗೇಶ್. ಉಪಸ್ಥಿತರಿದ್ದರು.

ಸಾಲ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ : ಎಂ.ಕೆ ಬಾಲಸುಬ್ರಮಣ್ಯ     ಹಾಸನ        ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಿಂದ ದೊರೆಯುವ ಸಾಲ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ ಎಂದು ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಎಂ.ಕೆ ಬಾಲಸುಬ್ರಮಣ್ಯ ಅವರು ಕರೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಹಾಸನ ಮತ್ತು ಚಿಕ್ಕಮಗಳೂರು ಶಾಖೆಗಳು ಜಂಟಿಯಾಗಿ ಇತ್ತೀಚೆಗೆ ಹಾಸನದ ಮಲ್ಲಿಗೆ ರೆಸಿಡೆನ್ಸಿಯಲ್ಲಿ ವ್ಯವಹಾರ ಅಭಿವೃದ್ಧಿ ಸಭೆ ಮತ್ತು ಸರ್ಕಾರಿ ಯೋಜನೆಗಳ ಬಗ್ಗೆ…

ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಅರಸೀಕೆರೆ ತಾಲೂಕು ವಿಶ್ವಕರ್ಮ ಸಮುದಾಯದಿಂದ ಸ್ವಾಗತ..

ಬರುವ 26ರಂದು ಅಂದರೆ ಶನಿವಾರ ಅರಸೀಕೆರೆ ನಗರಕ್ಕೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ. ಉಪಮುಖ್ಯಮಂತ್ರಿ  ಡಿ ಕೆ ಶಿವಕುಮಾರ್ ಹಾಗೂ ಇನ್ನಿತರ ಸಚಿವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ತಾಲೂಕು ವಿಶ್ವಕರ್ಮ ಸಮುದಾಯದ ವತಿಯಿಂದ ಕಾರ್ಯಕ್ರಮ ಯಶಸ್ವಿಯಾಗಲೆಂದು  ಅರಸಿಕೆರೆ ತಾಲೂಕ್  ವಿಶ್ವಕರ್ಮ ಸಮುದಾಯದ  ಅಧ್ಯಕ್ಷರಾದ ಯೋಗೀಶ್ ಆಚಾರ್ ತಿಳಿಸಿದರು. ತಾಲೂಕಿನ  ವಿಶ್ವಕರ್ಮ ಸಮುದಾಯ ಭವನ  ಪ್ರಪ್ರಥಮವಾಗಿ ಜಾಗ ಗುರುತು ಮಾಡಿಸಿ ಕೊಟ್ಟಿದ್ದು  ಈಗಿನ ನಗರಸಭೆಯ ಅಧ್ಯಕ್ಷರಾದ ಎಮ್ ಸಮೀವುಲ್ಲಾ ಅವರು  ನಂತರ ಶಾಸಕ ಶಿವಲಿಂಗೇಗೌಡರು  ನಮ್ಮ ಸಮುದಾಯವನ್ನು ಗುರುತಿಸಿ ನಮ್ಮನ್ನು ಕರೆಸಿ  ಹಂತ ಹಂತವಾಗಿ 65 ಲಕ್ಷಕ್ಕೂ ಹೆಚ್ಚು  ಅನುದಾನವನ್ನು ಕೊಡಿಸಿ  ಇನ್ನು ಮುಂದೆಯೂ ಸಹ  ಸಮುದಾಯ ಭವನ ಪೂರ್ಣಗೊಳಿಸಲು ಸರ್ಕಾರದಿಂದ ಅನುದಾನ ಕೊಡಿಸುವುದಾಗಿ ಭರವಸೆ ನೀಡಿರುವುದು  ನಮ್ಮ ಇಡೀ ವಿಶ್ವಕರ್ಮ ಸಮುದಾಯಕ್ಕೆ  ಸಂತೋಷ ತಂದಿದೆ ಎಂದರು  ಅಲ್ಲದೆ  ರಾಷ್ಟ್ರೀಯ ಹೆದ್ದಾರಿ  206 ರಲ್ಲಿ ಎಪಿಎಂಸಿ ಮುಂಬಾಗ ವಿಶ್ವಕರ್ಮ ವೃತ್ತ ಎಂದು ನಾಮಕರಣ ಮಾಡಲು  ಸರ್ಕಾರಕ್ಕೆ ಮತ್ತು ಶಾಸಕರಿಗೆ ಮನವಿ ನೀಡಿದ್ದು  ಇದಕ್ಕೂ ಸಹ ಶಾಸಕ ಶಿವಲಿಂಗೇಗೌಡರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು. ಗಂಡಸಿಗೆ ಹೋಬಳಿ ಸಂಘಟನಾ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಮುಖಂಡ ದೇವರಾಜ್. ಕಾರ್ಯದರ್ಶಿ ಪ್ರಸನ್ನ ಆಚಾರ್. ಸಹ ಸಂಘಟನಾ ಕಾರ್ಯದರ್ಶಿ ಸ್ವಾಮಿ. ನಿರ್ದೇಶಕರಾದ ನವೀನ್. ಉಪಸ್ಥಿತರಿದ್ದರು

ಎನ್‌ಪಿಎಸ್ ನಿವೃತ್ತಿ ಹಣದ ತೊಂದರೆಯ ಬಗ್ಗೆ ವಿಧಾನಸಭಾಧ್ಯಕ್ಷರ ಗಮನಕ್ಕೆ ತಂದ ಟೈಲರ್ ಸಂಘದ ಪದಾಧಿಕಾರಿಗಳು..

ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಸಂಸ್ಥೆಯ ಹೊಲಿಗೆ ಕಾರ್ಮಿಕರು ಈ ಹಿಂದೆ ಕಾರ್ಮಿಕರ ಎನ್‌ಪಿಎಸ್ ನ್ಯಾಷನಲ್ ಪೆನ್ಷನ್ ಸಿಸ್ಟಮ್ ಮುಖಾಂತರ ಪ್ರತಿ ವರ್ಷ ಹಣವನ್ನು ಬೆಂಗಳೂರಿನ ಅಲಂಕೀತ್…

.. ಬಡ ಕುಟುಂಬದ 300 ಫಲಾನುಭವಿಗಳಿಗೆ ದಿನಾಂಕ 26ರಂದು  ಗುಂಪು ಮನೆಯ ಹಸ್ತಾಂತರ …                               ಅರಸೀಕೆರೆ  ನಗರಸಭಾ ವ್ಯಾಪ್ತಿಯ ಜೇನುಕಲ್ ನಗರದಲ್ಲಿ ಜಿ+1 ಒನ್ ಗುಂಪು ಮನೆಯ ಯೋಜನೆ ಅಡಿ ನಿರ್ಮಾಣವಾಗುತ್ತಿರುವ 1181 ಮನೆಗಳ ಪೈಕಿ 300 ಮನೆಗಳನ್ನು ನಿರ್ಮಾಣ ಮಾಡಲಾಗಿದ್ದು ದಿನಾಂಕ 26/07/2025 ರಂದು ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರು ಹಾಗೂ ಮಾನ್ಯ ಉಪ ಮುಖ್ಯಮಂತ್ರಿಗಳಾದ ಮಾನ್ಯ ಡಿಕೆ ಶಿವಕುಮಾರ್ ರವರು ಹಾಗೂ ಶ್ರೀ ಬಿ. ಜೆಡ್. ಜಮೀರ್ ಅಹಮದ್ ಖಾನ್ ರವರು ಮಾನ್ಯ ವಸತಿ ಸಚಿವರು ಇವರ ಸಮ್ಮುಖದಲ್ಲಿ ಈಗಾಗಲೇ ಪೂರ್ಣಪ್ರಮಾಣದಲ್ಲಿ ನಿರ್ಮಾಣವಾಗಿರುವ 300 ಮನೆಗಳನ್ನು ಫಲಾನುಭವಿಗಳಿಗೆ ನೀಡಲಾಗುವುದು. ಎಂದು ನಗರ ಸಭೆ ಅಧ್ಯಕ್ಷರಾದ ಎಮ್ ಸಮೀ ವುಲ್ಲಾ ತಿಳಿಸಿದ್ದಾರೆ..