ರಾಜಕಾರಣ

ಅರಸೀಕೆರೆ ಶ್ರೀ ಪ್ರಸನ್ನ ಗಣಪತಿ  ಈ ವರ್ಷದ ಗುದ್ದಲಿ ಪೂಜೆ.

ಸರಿಸುಮಾರು 84 ವರ್ಷಗಳ ಕಾಲದ ಇತಿಹಾಸ ಇರುವ ಶ್ರೀ ಪ್ರಸನ್ನ ಗಣಪತಿ ಪೆಂಡಲ್ ನಲ್ಲಿ ಇಂದು ಈ ವರ್ಷದ ಗುದ್ದಲಿ ಪೂಜಾ ಕಾರ್ಯಕ್ರಮವು ದಿನಾಂಕ 3-3-2025 ರಂದು…

ಶ್ರೀ ಬಿ.ಬಿ.ಶಿವಪ್ಪ ರವರ ಪುಣ್ಯಸ್ಮರಣೆ ದಿನದಂದು ಗೌರವ ನಮನಗಳು….ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಹಿರಿಯ ಬಿಜೆಪಿ ಮುಖಂಡರು ಹಾಗೂ ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಶ್ರೀ ಬಿಬಿ ಶಿವಪ್ಪನವರು,ಶ್ರೀ ಬಿ.ಬಿ.ಶಿವಪ್ಪ ಸೆಪ್ಟೆಂಬರ್ 27,1929 ರಂದು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನಲ್ಲಿ ಜನಿಸಿದರು. ಅವರ ರಾಜಕೀಯ ಜೀವನವು ಕಾಂಗ್ರೆಸ್ಸಿನ ಕೆ.ಕಾಮರಾಜ್ ಮತ್ತುಮೊರಾರ್ಜಿದೇಸಾಯಿಯವರ ಆರಂಭಿಕ ಒಡನಾಟದಿಂದ ಪ್ರಾರಂಭವಾಯಿತು.ಬಿಜೆಪಿಗೆ ಸೇರಿದ ಶಿವಪ್ಪನವರು 1983ರಲ್ಲಿ ಎ.ಕೆ.ಸುಬ್ಬಯ್ಯನವರ ನಂತರ ಬಿಜೆಪಿ ಪಕ್ಷದ ಎರಡನೇ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದರು. 1984 ರ ಅವಧಿಯಲ್ಲಿ, ಶಾಸಕಾಂಗದಿಂದ ವಿಧಾನಪರಿಷತ್ತಿಗೆ ಆಯ್ಕೆಯಾದರು ಮತ್ತು 1990 ರವರೆಗೆ ಸದನದ ಸದಸ್ಯರಾಗಿ ಮುಂದುವರೆದರು. ಬಿಜೆಪಿಯ ಅನುಭವಿ ಬಿ.ಬಿ. ಶಿವಪ್ಪನವರು ನಂತರ ಸಕಲೇಶಪುರದಿಂದ ಚುನಾವಣೆಗೆ ಸ್ಪರ್ಧಿಸಿದರು ಮತ್ತು 1994 ರಲ್ಲಿ ಮೊದಲ ಬಾರಿಗೆ ಆಯ್ಕೆಯಾದರು. ಅವರು 1999 ರಲ್ಲಿ ಮರು ಆಯ್ಕೆಯಾದರು ಮತ್ತು 2004 ರವರೆಗೆ ಸದಸ್ಯರಾಗಿ ಮುಂದುವರೆದರು88 ವರ್ಷದ ಶಿವಪ್ಪ ಅವರು ರಾಜ್ಯ ಬಿಜೆಪಿ ಘಟಕದ ಹಲವಾರು ಹಿರಿಯ ನಾಯಕರಿಗೆ ಮಾರ್ಗದರ್ಶಕರಾಗಿದ್ದರು ಮತ್ತು ಕರ್ನಾಟಕದಲ್ಲಿ ಪಕ್ಷದ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದರು. 1980ರ ದಶಕದಲ್ಲಿ ಮಾಜಿ ಪಕ್ಷದ ಅಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪನವರ ಉದಯಕ್ಕೂ ಮುನ್ನವೇ ರಾಜ್ಯದಲ್ಲಿ ಬಿಜೆಪಿ ಇನ್ನೂ ಉಗಮದ ಹಂತದಲ್ಲಿದ್ದಾಗ ಪಕ್ಷವನ್ನು ಕಟ್ಟಿ ಬೆಳೆಸಿದ ಕೀರ್ತಿ ಶಿವಪ್ಪನವರಿಗೆ ಸಲ್ಲುತ್ತದೆ.ಕರ್ನಾಟಕ ಬಿಜೆಪಿ ಇತಿಹಾಸಕ್ಕೆ ಮೆರುಗು ಮತ್ತು ಶೋಭೆ ತಂದು ಕೊಟ್ಟವರು ಬಿ ಬಿ ಶಿವಪ್ಪನವರು ಇಂದಿನವರಂತೆ ಅವರು ಪಕ್ಷದಿಂದ ಏನೂ ಬಯಸಿದವರಲ್ಲ. ಪಕ್ಷ ಸಂಘಟನೆಗಾಗಿ ಮನೆ ಮಾರಿಕೊಂಡರಲ್ಲದೇ ತನು,ಮನ, ಧನವನ್ನು ಸಮರ್ಪಣೆ ಮಾಡಿದ ಸಜ್ಜನ ರಾಜಕಾರಣಿ. ಪಕ್ಷದ ವರಿಷ್ಠ ನಾಯಕರಾಗಿದ್ದ ಶ್ರೀ ದೀ ಅಟಲ್ ಬಿಹಾರಿ ವಾಜಪೇಯಿ ಅವರು ಹಾಗ ಕರ್ನಾಟಕಕ್ಕೆ ಬಂದರೆ ಉಳಿದುಕೊಳ್ಳುತ್ತಿದ್ದು ಬೆಂಗಳೂರಿನ ಶಾಂತಿನಗರದಲ್ಲಿದ್ದ ಶಿವಪ್ಪನವರ ಮನೆಯಲ್ಲೇ.ಬಿಜೆಪಿಯ ನಾಯಕರಾದ ವೆಂಕಯ್ಯನಾಯ್ಡು, ಅನಂತ್ ಕುಮಾರ್, ಯಡಿಯೂರಪ್ಪರಿಗೆ ಬಿಫಾರಂ ಕೊಟ್ಟಿದ್ದರು. ಪಕ್ಷದಿಂದ ಕೊಟ್ಟಿದ್ದ ಕಾರಿನಲ್ಲಿ ಶ್ರೀಯುತಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ ಅಡ್ವಾಣಿಯವರನ್ನು ರಾಜ್ಯಾದ್ಯಂತ ಸುತ್ತಾಡಿಸಿದ್ದರು ಅವೆಲ್ಲವೂ ಇಂದು ಸವಿ ನೆನಪು ಮಾತ್ರ.

ವರದಿ : ಭರತ್ ಮಲ್ನಾಡ್

ರಸಗೊಬ್ಬರದ ಕೊರತೆ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ವತಿಯಿಂದ : ಹಾಸನ ನಗರದ ಕೃಷಿ ಜಂಟಿ ನಿರ್ದೇಶಕರ ಕಚೇರಿ ಎದುರು ನಡೆದ ಬೃಹತ್ ಪ್ರತಿಭಟನೆ :

ಬೇಡಿಕೆ ತಲುಪದ ಪೂರೈಕೆ

ಜಿಲ್ಲೆಯಲ್ಲಿ ಆಗಾಗ ‌ಸುರಿಯುತ್ತಿರುವ ಧಾರಾಕಾರ, ಸಾಧಾರಣ ಹಾಗೂ ಜಡಿಮಳೆಯು ಬಿತ್ತನೆ ಚಟುವಟಿಕೆಗೆ ಮತ್ತಷ್ಟು ಹುರುಪು ನೀಡಿದೆ. ಇದರ ಜೊತೆಗೆ ವಿವಿಧ ರಸಗೊಬ್ಬರಗಳಿಗೂ ರೈತರಿಂದ ಬೇಡಿಕೆ ಹೆಚ್ಚಾಗಿದೆ. ಆದರೆ, ಜಿಲ್ಲೆಗೆ ಬೇಡಿಕೆ ಇರುವಷ್ಟು ರಸಗೊಬ್ಬರವು ಸರಬರಾಜು ಆಗಿಲ್ಲ. ಕೆಲ ಗೊಬ್ಬರಗಳ ಕೊರತೆ ಎದುರಾಗಿದೆ.
ಕೇಂದ್ರ ಸರ್ಕಾರ ಸಮರ್ಪಕವಾಗಿ ನೀಡಿರುವ ರಸಗೊಬ್ಬರವನ್ನು ಸರಿಯಾಗಿ ರೈತರಿಗೆ ಹಂಚಿಕೆ ಮಾಡದ ರೈತವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ವತಿಯಿಂದ ಹಾಸನ ನಗರದ ಕೃಷಿ ಜಂಟಿ ನಿರ್ದೇಶಕರ ಕಚೇರಿ ಎದುರು ನಡೆದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ರೈತರಿಗೆ ಅನ್ಯಾಯವೆಸಗುತ್ತಿರುವ ರಾಜ್ಯ ಸರ್ಕಾರದ ಬೇಜವಾಬ್ದಾರಿತನವನ್ನು ಖಂಡಿಸಿ ರಾಜ್ಯ ಸರ್ಕಾರ ನಿರ್ಲಕ್ಷೆ ವಹಿಸದೆ ತಕ್ಷಣದಿಂದಲೇ ರೈತರು ಅನುಭವಿಸುತ್ತಿರುವ ತೊಂದರೆಯನ್ನು ನಿವಾರಿಸಬೇಕೆಂದರು.
ಪ್ರತಿಭಟನೆಯಲ್ಲಿ ಬೇಲೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಕೆ ಸುರೇಶ್ ರವರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ರೈತ ಮೋರ್ಚಾ ಜಿಲ್ಲಾ ಪದಾಧಿಕಾರಿಗಳು, ತಾಲ್ಲೂಕು ಅಧ್ಯಕ್ಷರುಗಳು, ಇನ್ನಿತರ ಮುಖಂಡರು, ರೈತರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು

ವರದಿ: ಭರತ್ ಮಲ್ನಾಡ್

ಮೊದಲ ಬಾರಿಗೆ ಸರ್ಕಾರದ ಆದೇಶದಂತೆ ಕೌನ್ಸಿಲಿಂಗ್ ಮೂಲಕ ವರ್ಗಾವಣೆ
ಹಾಸನ    ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮ ಪಂಚಾಯತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-1, ಗ್ರೇಡ್-2 ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರುಗಳ 2025-26 ನೇ ಸಾಲಿನಲ್ಲಿ ಸಾರ್ವತ್ರಿಕ ವರ್ಗಾವಣೆಯನ್ನು ಆನ್‌ಲೈನ್ ಕೌನ್ಸಿಲಿಂಗ್ ಮೂಲಕ ಮಾಡಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಪ್ರಾಧಿಕಾರಿಗಳನ್ನಾಗಿಸಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಅದರಂತೆ ಜಿಲ್ಲಾ ಪಂಚಾಯಿತಿ ಕಾರ್ಯಾಲಯದಲ್ಲಿಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್ ಪೂರ್ಣಿಮಾರವರ ಅಧ್ಯಕ್ಷತೆಯಲ್ಲಿ 2024-25 ನೇ ಸಾಲಿನಲ್ಲಿ ಹೊರಡಿಸಿದ ಅಧಿಸೂಚನೆಯಂತೆ ಜಿಲ್ಲಾ ಮಟ್ಟದ ಕೌನ್ಸಿಲಿಂಗ್ ವರ್ಗಾವಣೆಗೆ ಸಂಬAಧಿಸಿದ ನೌಕರರುಗಳು ವರ್ಗಾವಣೆ ಬಯಸಿದ ಸ್ಥಳಗಳಿಗೆ ಕೌನ್ಸಿಲಿಂಗ್ ನಡೆಸಲಾಯಿತು.

ಜು.25 ರಂದು ವಿಶೇಷ ಪ್ರಕರಣಗಳಾದ ಅಂಗವಿಕಲತೆ ಮತ್ತು ದೈಹಿಕ ಅಸಮರ್ಥತಾ ಪ್ರಕರಣಗಳು, ಪತಿ- ಪತ್ನಿ ಪ್ರಕರಣಗಳು ಮತ್ತು 12 ವರ್ಷದೊಳಗಿನ ಮಕ್ಕಳಿರುವ ಒಂಟಿ ಪೋಷಕರು / ಒಂಟಿ ಮಹಿಳೆ / ವಿಕಲಚೇತನ ಮಕ್ಕಳಿರುವ ಪೋಷಕರುಗಳಿಗೆ ಶೇ.3 ರ ಮಿತಿಯಲ್ಲಿ ನಡೆಸಲಾಯಿತು.

ಜು.,28 ರ ಪೂರ್ವಾಹ್ನ ವಿಶೇಷ ವರ್ಗಾವಣಾ ಪ್ರಕರಣಗಳಿಂದ ಬಾಧಿತರಾದ ನೌಕರರುಗಳಿಗೆ ಹಾಗೂ ಸಾಮಾನ್ಯ ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ಶೇ.3 ರ ಮಿತಿಯಲ್ಲಿ ಹಾಗೂ ಜು.29 ರಂದು 5 ವರ್ಷಕ್ಕಿಂತ ಹೆಚ್ಚಿನ ಅವಧಿಯಲ್ಲಿ ಒಂದೇ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರುಗಳಿಗೆ ಶೇ.6 ರ ಮಿತಿಯಲ್ಲಿ ಪಾರದರ್ಶಕವಾಗಿ ನಿಯಮಾನುಸಾರ ವರ್ಗಾವಣೆ ಕೌನ್ಸಿಲಿಂಗ್ ನಡೆಸಲಾಯಿತು.

ಈ ವೇಳೆಯಲ್ಲಿ ಕೌನ್ಸಿಲಿಂಗ್ ಮೂಲಕ ವರ್ಗಾವಣೆಯಾದ ಸಂಬAಧಪಟ್ಟ ನೌಕರರಿಗೆ ವರ್ಗಾವಣೆ ಆದೇಶವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿಯ ಉಪಕಾರ್ಯದರ್ಶಿ (ಅಭಿವೃದ್ಧಿ)ಗಳಾದ ಕೆ.ಹೆಚ್ ಕೃಷ್ಣಮೂರ್ತಿ ಯವರು ಉಪಸ್ಥಿತರಿದ್ದರು.